ಸುಬ್ರಹ್ಮಣ್ಯ: ಫೇಸ್ಬುಕ್ ಮೂಲಕ ಪರಿಚಯವಾಗಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿ ದ್ದಾನೆಂದು ಯುವತಿ ದೂರು ನೀಡಿದ್ದಾಳೆ.
ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ ಮದುವೆಯಾಗುವ ಭರವಸೆ ನೀಡಿ ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆಕೆ ಹೇಳಿದ್ದು, ಗರ್ಭಪಾತ ಸಹ ಮಾಡಿಸಿದ್ದಾನೆ ಎಂದು ತಿಳಿಸಿದ್ದಾನೆ. ಆದರೆ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಯುವತಿ ನೀಡಿರುವ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಂಡ ಪೊಲೀಸರು ರಕ್ಷಿತ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Click this button or press Ctrl+G to toggle between Kannada and English