ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಕೊಡುವುದಾಗಿ ಪ್ರತಿಭಾ ಕುಳಾಯಿ ಘೋಷಣೆ

9:12 PM, Monday, February 8th, 2021
Share
1 Star2 Stars3 Stars4 Stars5 Stars
(No Ratings Yet)
Loading...

Prathiba Kulai ಮಂಗಳೂರು :  ಬಿಲ್ಲವ ಮುಖಂಡ ಬಿ.ಜನಾರ್ದನ ಪೂಜಾರಿಯವರ ಕಾಲು ಹಿಡಿದು ಕ್ಷಮೆಯಾಚಿಸಬೇಕು, ವೀರ ಪುರುಷ ಕೋಟಿ ಚೆನ್ನಯ್ಯರನ್ನು ಅವಹೇಳನ ಮಾಡಿದ್ದಕ್ಕೆ ಮೂರು ದಿನದಲ್ಲಿ ತಪ್ಪು ಕಾಣಿಕೆ ಹಾಕಬೇಕು ಎಂದು ಫೇಸ್ಬುಕ್ ಲೈವ್ನಲ್ಲಿ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿಗೆ ಹೇಳಿದ್ದಾರೆ.

ಅಲ್ಲದೆ  ಬಿಲ್ಲವ ಸಮುದಾಯದ ನಾಯಕ ಜನಾರ್ದನ ಪೂಜಾರಿ ಹಾಗೂ ಕೋಟಿ-ಚೆನ್ನಯರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿರುವ ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುವ ಬಿಲ್ಲವ ಸಮುದಾಯದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರತಿಭಾ ಕುಳಾಯಿಯವರು ಫೇಸ್ಬುಕ್ ಲೈವ್ನಲ್ಲಿ ಹೇಳಿಕೆ ನೀಡಿದ್ದಾರೆ‌.

ಬಿಲ್ಲವ ಮುಖಂಡ ಬಿ.ಜನಾರ್ದನ ಪೂಜಾರಿಯವರ ಕಾಲು ಹಿಡಿಯೋದಿಲ್ಲ ಎಂದು ಹೇಳಿಕೆ ನೀಡಿರುವ ಜಗದೀಶ್ ಅಧಿಕಾರಿಯವರು ಅವರ ಕಾಲು ಹಿಡಿದು ಕ್ಷಮೆಯಾಚಿಸಬೇಕು. ವೀರ ಪುರುಷ ಕೋಟಿ ಚೆನ್ನಯ್ಯರನ್ನು ಅವಹೇಳನ ಮಾಡಿದ್ದಕ್ಕೆ ಮೂರು ದಿನದಲ್ಲಿ ತಪ್ಪು ಕಾಣಿಕೆ ಹಾಕಬೇಕು ಎಂದು ಹೇಳಿದ್ದಾರೆ‌.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English