ಬಜೆಟ್ನಲ್ಲಿ ಕೊರೋನಾದ ಹೆಸರಲ್ಲಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ : ಯು.ಟಿ. ಖಾದರ್

11:59 PM, Wednesday, February 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

ut-khader ಮಂಗಳೂರು : ಕೇಂದ್ರ ಸರಕಾರ ಮಂಡನೆ ಮಾಡಿರುವ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆಗಳಿಲ್ಲ. ಪ್ರಕೃತಿ ವಿಕೋಪಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಸೇಲ್ ಇಂಡಿಯಾ, ಲೂಟ್ ಇಂಡಿಯಾ ಬಜೆಟ್ ಅನ್ನು ಕೇಂದ್ರ ಸರಕಾರ ಮಂಡಿಸಿದೆ.  ಕೊರೋನಾದ ಹೆಸರಲ್ಲಿ ಜನರಿಗೆ ತೆರಿಗೆ ಹಾಕಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆ ಇಲ್ಲ. ರಾಜ್ಯದ ಸಂಸದರು ಏನು ಮಾಡ್ತಾ ಇದ್ದಾರೆ? ಬಿಜೆಪಿ ರಾಜ್ಯಧ್ಯಕ್ಷರು, ಸಂಸದರಾಗಿದ್ದು ತಮ್ಮ ಕ್ಷೇತ್ರಕ್ಕೆ ಏನು ತಂದಿದ್ದಾರೆ? ಎಂದು  ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English