[1]ಅಹಮದಾಬಾದ್: ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ.
ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು.
ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಮತ್ತು ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ ಸಿಎಂ ಕುಸಿದು ಬಿದ್ದಾಗಿತ್ತು. ಆದರೆ ಕೆಲ ನಿಮಿಷಗಳಲ್ಲಿ ಅವರು ಪುನಃಅ ಚೇತರಿಸಿಕೊಂಡಿದ್ದರು. ಆದರೆ ಮತ್ತೆ ಭಾಷಣ ಮುಂದುವರಿಸಲಿಲ್ಲ.
ಸದ್ಯ ಸಿಎಂ ಆರೋಗ್ಯದಲ್ಲಿ ಸುಧಾರಣೆ ಆಗಿದೆ, ಗಾಬರಿಯಾಗುವ ಅಗತ್ಯವಿಲ ಎಂದು ಅಹಮದಾಬಾದ್ ನ ಆಸ್ಪತ್ರೆಯ ಮೂಲಗಳು ಹೇಳಿದೆ.