ವಿದ್ಯುತ್ ಸ್ಪರ್ಶಿಸಿ ಯುವಕನ ದಾರುಣ ಸಾವು

11:29 PM, Thursday, February 18th, 2021
Share
1 Star2 Stars3 Stars4 Stars5 Stars
(No Ratings Yet)
Loading...

Avinashಬೆಳ್ತಂಗಡಿ :  ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾನರ್ಪ ಕೌಡಂಗೆ ಎಂಬಲ್ಲಿ ನಡೆದಿದೆ.

ಕೌಡಂಗೆ ನಿವಾಸಿ ಅವಿನಾಶ್(23) ಮೃತ ದುರ್ದೈವಿಯಾಗಿದ್ದಾರೆ.

ಮನೆಯಲ್ಲಿ ವಿದ್ಯುತ್ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ವಿದ್ಯುತ್ ಅವಘಡ ಸಂಭವಿಸಿದೆ. ತಕ್ಷಣ ಮನೆಮಂದಿ ಯುವಕನನ್ನು ಆಸ್ಪತ್ರೆಗೆಂದು ಕರೆದೊಯ್ದಿದ್ದಾರೆ. ಆದರೆ, ದಾರಿ ಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಕೌಡಂಗೆ ನಿವಾಸಿ ಕೃಷಿಕ ಚನನ ಗೌಡ ಮತ್ತು ದೇವಕಿ ದಂಪತಿಯ ಮೂರನೇ ಪುತ್ರರಾಗಿರುವ ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಎಲೆಕ್ಟ್ರೀಷಿಯನ್ ಸಹಾಯಕರಾಗಿ ಕೂಡಾ ಕೆಲಸ ಮಾಡುತ್ತಿದ್ದ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English