ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

11:57 PM, Monday, March 1st, 2021
Share
1 Star2 Stars3 Stars4 Stars5 Stars
(No Ratings Yet)
Loading...

BMWcarಮಂಗಳೂರು : ಐಷಾರಾಮಿ ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ  ದಿನಗಳ ಹಿಂದಷ್ಟೇ ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತುಗೊಳಿಸಿದ ಬಳಿಕ  ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ.

ಸಿಸಿಬಿಯಲ್ಲಿದ್ದ ರಾಜ ಮತ್ತು ಆಶಿತ್ ಡಿಸೋಜ ಎಂಬ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ.

ಈ ನಡುವೆ ಕಾರು ಮಾರಾಟ ಮತ್ತು ಅದಕ್ಕೆ ಕಾರಣವಾದ ಮನಿ ಡಬ್ಲಿಂಗ್ ಪ್ರಕರಣವನ್ನು ಡಿಜಿಪಿಯವರು ಸಿಐಡಿ ತನಿಖೆಗೆ ಒಪ್ಪಿಸಿದ್ದರು. ಒಟ್ಟು ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ನೀಡಿದ ವರದಿಯಂತೆ ಡಿಜಿಪಿ ಕ್ರಮ ಜರುಗಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English