ರಾಸಲೀಲೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

5:53 PM, Wednesday, March 3rd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

jarakiholi
ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.

ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ರಾಜಿನಾಮೆ ನೀಡಿದ್ದರು.

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಈ ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕಿದ್ದು, ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಈದೀಗ ಈ ರಾಜಿನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಂಗೀಕರಿಸಿದ್ದು, ರಾಜ್ಯಪಾಲರ ಅನುಮೋದನೆಗಾಗಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English