ಮಂಗಳೂರು : ಸುರತ್ಕಲ್ ಮುಕ್ಕದ ಶ್ರೀನಿವಾಸ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ ಪ್ರಾಶುಂಪಾಲರಿಗೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ.
ಕಾಲೇಜು ಪ್ರಾಶುಂಪಾಲರು ಈ ಬಗ್ಗೆ ದೂರು ದಾಖಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಾದ ಮಹಮ್ಮದ್ ಬಾಝಿಲ್, ಸಂಭ್ರಮ್ ಆಳ್ವ, ಸಮೀಲ್, ಅಶ್ವಿನ್ ಎಸ್. ಜಾನ್ಸನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ
ಮಾ.3ರ ಬುಧವಾರ ಕಾಲೇಜಿನಲ್ಲಿ ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಶುಂಪಾಲರ ಗಮನಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕರೆದ ಪ್ರಾಶುಂಪಾಲರು ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದ್ದಲ್ಲದೆ, ಮತ್ತೆ ಇಂತಹ ನಡವಳಿಕೆ ಮುಂದುವರಿಸಿದರೆ ಡಿಬಾರ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಪ್ರಿನ್ಸಿಪಾಲ್ಗೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಮಾಡಿದ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ರ್ಯಾಗಿಂಗ್ ಪ್ರಕರಣವಾಗಿದೆ.
Click this button or press Ctrl+G to toggle between Kannada and English