ಮಂಗಳೂರು : ಸ್ಕೂಟರ್ ಅಡ್ಡಗಟ್ಟಿ ಸರಕಾರಿ ಬಸ್ ಚಾಲಕನಿಗೆ ತಲವಾರಿನಿಂದ ತಿವಿದು ಕೊಲೆ ಯತ್ನ

10:20 PM, Friday, March 5th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Shohifಮಂಗಳೂರು : ಸ್ಕೂಟರ್ ಅಡ್ಡವಿಟ್ಟು ಸರಕಾರಿ ಬಸ್ ಚಾಲಕನಿಗೆ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ಶುಕ್ರವಾರ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಡ್ಯಾರ್ ಕಣ್ಣೂರಿನ ಕುಂಡಾಲದ  ಆರೋಪಿ ಸೊಹೀಫ್ (19) ತಂದೆ ಅಬ್ದುಲ್ ಶರೀಪ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ.

ಪುತ್ತೂರು ಡಿಪೋ ಕೆಎಸ್ಸಾರ್ಟಿಸಿ ಬಸ್ ಚಾಲಕನಾಗಿದ್ದ ರಾಜು ಗಜಕೋಶ ಅವರನ್ನು ತಡೆದ ಆರೋಪಿಯು ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಮಂಗಳೂರು ಕಡೆಗೆ ಬಸ್ ಚಲಾಯಿಸಿಕೊಂಡು ರಾಜು ಗಜಕೋಶ ತೆರಳುತ್ತಿದ್ದಾಗ ಸ್ಕೂಟರ್ ಸವಾರ ಸೈಫ್ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಪಡೀಲ್ ರೈಲ್ವೆ ಒವರ್ ಬ್ರಿಡ್ಜ್ ಬಳಿ ತಲುಪಿದೊಡನೆ ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್‌ನಲ್ಲಿದ್ದ ತಲವಾರು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English