[1]ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಮೃತ ಯುವಕ. ಕ್ಯಾಂಟೀನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಸಂಭವಿಸಿ ದುರ್ಘಟನೆ ನಡೆದಿದೆ.
ಮೃತ ಯುವಕನು ಕೆಪಿಟಿ ಕಾಲೇಜಿನಲ್ಲಿ ಓದುತ್ತಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.