ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರ ಉಡುಪಿ, ಕಾರವಾರ ಮನೆಗೆ ದಾಳಿ

2:05 PM, Tuesday, March 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

ACB raid ಉಡುಪಿ : ಸರಕಾರಿ ಅಧಿಕಾರಿಯೋರ್ವರ ಮನೆಯೊಂದಕ್ಕೆ ಎಸಿಬಿ ಅಧಿಕಾರಿಗಳು ಮಾ.9, ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ವಡ್ಡಾರು ಅವರ ಮನೆಗೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಇವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರು ಆಗಿದ್ದರು.

ಉಡುಪಿಯ ಹೊರವಲಯದ ಪುತ್ತೂರು ಎಂಬಲ್ಲಿರುವ ಮನೆ ಮೇಲೆ ಮಂಗಳೂರು ವಿಭಾಗದ ಎಸಿಬಿ ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಯುತ್ತಿದೆ.

ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ ಹೊಂದಿದ್ದಾರೆ ಎನ್ನಲಾದ ಒಟ್ಟು ನಾಲ್ಕು ಕಡೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English