ದಕ್ಷಿಣ ಕನ್ನಡ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಸದಾನಂದ ಪೂಂಜ

6:50 PM, Saturday, March 13th, 2021
Share
1 Star2 Stars3 Stars4 Stars5 Stars
(No Ratings Yet)
Loading...

Sadananda Poonjaಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ, ದ.ಕ. ಜಿ.ಪಂ. ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ(80) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದ ಅವರು ಸಜೀಪಮೂಡ ಗ್ರಾಮದ ಅಭಿವೃದ್ಧಿಯ ರೂವಾರಿಗಳಾಗಿ ಗುರುತಿಸಿಕೊಂಡಿದ್ದರು, ಸಜೀಪ ಮಾಗಣೆಯ ಆಡಳಿತದಾರರಾಗಿದ್ದರು. ದ.ಕ. ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಸುಭಾಷ್‌ನಗರ ಶಾರದೋತ್ಸವ ಸಮಿತಿ, ಸುಭಾಷ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ, ಸಜೀಪಮೂಡದಲ್ಲಿ ಸರಕಾರಿ ಪ.ಪೂ.ಕಾಲೇಜು ಸ್ಥಾಪನೆಗೆ ಪ್ರಮುಖ ಕಾರಣರಾಗಿದ್ದರು.

ತಾಲೂಕು ಬೋರ್ಡ್ ಉಪಾಧ್ಯಕ್ಷರಾಗಿ, ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಸದಸ್ಯರಾಗಿ, ಮಂಡಲ ಹಾಗೂ ಗ್ರಾ.ಪಂ. ಅಧ್ಯಕ್ಷರಾಗಿ, ಈಶ್ವರಮಂಗಲ ದೇವಸ್ಥಾನದ ಅಭಿವೃದ್ಧಿಯ ರೂವಾರಿಗಳಾಗಿ ಹೀಗೆ ಹತ್ತು ಹಲವು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಇಂದು ಸಂಜೆ (ಮಾ.13) ಸಜೀಪಮೂಡ ಸುಭಾಷ್‌ನಗರದಲ್ಲಿರುವ ಅವರ ಮನೆ ಶಾಂತಿ ನಿಕೇತನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ದೇವಿಪ್ರಸಾದ್ ಪೂಂಜ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English