[1]ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.
ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.
ಇನ್ನೊಂದೆಡೆ ಕಾರೈಕುಡಿ ಕ್ಷೇತ್ರದಿಂದ ಹೆಚ್. ರಾಜಾ ಹಾಗೂ ಧರ್ಮಪುರಂ ಕ್ಷೇತ್ರದಿಂದ ಮುರುಗನ್ ಕಣಕ್ಕಿಳಿಯಲಿದ್ದಾರೆ.