ಅಪಘಾತಕ್ಕೊಳಗಾಗಿದ್ದ ಎಎಸ್‌ಐ ನಾರಾಯಣ ನಾಯ್ಕ್ ವಿಧಿವಶ

7:21 PM, Sunday, March 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

Narayan nayak ಮಂಗಳೂರು : ಪಾಂಡೇಶ್ವರ ಸಂಚಾರ ಪಶ್ಚಿಮ ಠಾಣಾ ಎಎಸ್‌ಐ ನಾರಾಯಣ ನಾಯ್ಕ್ ಎರಡು ವರ್ಷದ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 14 ರವಿವಾರ ಮೃತಪಟ್ಟಿದ್ದಾರೆ.

2018 ಅಕ್ಟೋಬರ್ 10ರಂದು ಹೈವೇ ಪ್ಯಾಟ್ರೋಲಿಂಗ್ ವೇಳೆ ಮೇರಿಹಿಲ್ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿ  ತೀವ್ರ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತರ  ನೇತೃತ್ವದಲ್ಲಿ ಮಂಗಳೂರು ಸಿಎಆರ್ ಮೈದಾನದಲ್ಲಿ ಪಾರ್ಥಿವ ಶರೀರಕ್ಕೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು,

Narayan nayak

Narayan nayak

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English