ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಸಂಬಂಧಿ ಸಾವು

6:09 PM, Monday, March 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

Sirasi Accident ಶಿರಸಿ  : ಬಸ್ಸು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಈ ಘಟನೆ ಶಿರಸಿ ನಗರದ ಎಸ್‍ಬಿಐ ಸರ್ಕಲ್ ಬಳಿ ಸಂಭವಿಸಿದೆ.

ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಎಂದು ಗುರುತಿಸಲಾಗಿದೆ.

ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರೂ ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ಸು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‍ನಲ್ಲಿದ್ದ ಯುವಕರಿಬ್ಬರೂ ಬಸ್ಸು ಅಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆ ಮೂಲಕ ಕುಟುಂಬದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ತಂದೆ, ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು‌ ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English