ಹಿರಿಯ ಕಲ್ಲಂಗಡಿ ಕೃಷಿಕ, ಶತಾಯುಷಿ ಕೆ.ಸೇಸು ಸಪಲ್ಯ ನಿಧನ

6:36 PM, Monday, March 15th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Sesu Sapalyaಬಂಟ್ವಾಳ: ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (102) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ. ವಿಶ್ವನಾಥ್ ಬಿ.ಸಿ.ರೋಡು ಸಹಿತ ಮೂವರು ಪುತ್ರರು ಮತ್ತು ಏಳು ಮಂದಿ ಪುತ್ರಿಯರು ಇದ್ದಾರೆ.

ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ ಕ್ರೀಡೆ ಕಂಬಳ ಪ್ರೇಮಿಯಾಗಿ, ಪೊಳಲಿ ವಲಯ ಗಾಣಿಗ ಸಂಘದ ಹಿರಿಯ ಸದಸ್ಯರಾಗಿದ್ದರು. ಪೊಳಲಿ ಜಾತ್ರೆ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಬೇಗನೆ ಎದ್ದು ದೇವಳಕ್ಕೆ ತೆರಳಿ ಮನೆಗೆ ಬಂದ ಬಳಿಕ ಅವರಿಗೆ ಹೃದಯಾಘಾತ ಉಮಟಾಗಿದೆ. ಮೃತರ ಅಂತ್ಯಕ್ರಿಯೆ ಮನೆ ಸಮೀಪದ ಕಂಚೇಶ್ವರ ಗದ್ದೆಯಲ್ಲಿ ಸೋಮವಾರ ಸಂಜೆ ನೆರವೇರಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English