- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬ್ಯಾಟರಿ ಶಾರ್ಟ್ ಸರ್ಕ್ಯೂಟ್ – ಕಾರು ಚಲಿಸುತ್ತಿರುವಾಗಲೇ ಬೆಂಕಿ

Mudradi Car [1]ಹೆಬ್ರಿ :  ಮಂಗಳವಾರ ಮುಂಜಾನೆ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಕಾರ್ಯಕ್ರಮ ಮುಗಿಸಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಮನೆಗೆ ವಾಪಾಸುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಅವರು ಕಾರಿನಿಂದ ಕೆಳಗಿದು ಬಚಾವ್ ಆಗಿದ್ದಾರೆ.

ಸ್ಥಳಕ್ಕಾಗಮಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಕಾರಿನ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.