ನಾಡಕೋವಿಯಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

12:32 AM, Friday, March 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

NadaKoviಕಾರ್ಕಳ :   ವಿವಾಹಿತ ಯುವಕನೋರ್ವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಾಡಕೋವಿಯಿಂದ ತನಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ವಿಶಾಕ್ ಪೂಜಾರಿ(30) ಎಂದು ಗುರುತಿಸಲಾಗಿದೆ.

ಮೃತ ಯುವಕ ವಿವಾಹಿತನಾಗಿದ್ದು 1ಹೆಣ್ಣು ಮಗುವನ್ನು ಹೊಂದಿದ್ದಾರೆ. ಇಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ನಂತರ ಪತ್ತೆಯಾಗಲಿಲ್ಲ. ಕಂಗಾಲಾದ ಮನೆಯವರು ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ .

ಸ್ಥಳಕ್ಕೆ ಕಾರ್ಕಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English