- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನ ಸಾಗಾಟ, ಕಸ್ಟಮ್ ಅಧಿಕಾರಿಗಳಿಂದ ವಿಚಾರಣೆ

Gold [1]ಮಂಗಳೂರು : ದುಬೈನಿಂದ ಬಂದ ಪ್ರಯಾಣಿಕರೊಬ್ಬರು ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ನಗರದ ಉಲ್ಲಾಸ್‌ ‌ನಗರದ ವ್ಯಕ್ತಿ ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ  ಬಂದಿದ್ದರು. ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ.

ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,16,238 ಎಂದು ಅಂದಾಜಿಸಲಾಗಿದೆ. ಕಸ್ಟಮ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.