- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ

Amzad [1]ಚಿಕ್ಕಬಳ್ಳಾಪುರ:  ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಕೊಲೆಯಾದ ಕಾಂಗ್ರೆಸ್ ಮುಖಂಡ ಅಮಜದ್ (43) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಅಮಜದ್ ನನ್ನು ಒಮ್ನಿ ಕಾರಿನ ಮೂಲಕ ಹಿಂಬಾಲಿಸಿ ಬಂದ ಅಪರಿಚಿತರು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮೃತ ಅಮಜದ್ ಮಿನಲ್ ಹಿನ್ನೆಲೆ ಹೊಂದಿದ್ದವನಾಗಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿದ್ದ.

ಶಿಡ್ಲಘಟ್ಟ ನಗರ ಪೊಲೀಸರು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆಯ ಉದ್ದೇಶ ತಿಳಿದುಬಂದಿಲ್ಲ. ಹಾಡಹಗಲೇ ಕೊಲೆ ನಡೆದ ವಿಷಯ ತಿಳಿದ ಶಿಡ್ಲಘಟ್ಟ ಪಟ್ಟಣದ ಜನ ಆತಂಕದಲ್ಲಿದ್ದಾರೆ.