ಪೊಲೀಸರ ಲಾಠಿ ಏಟು, ನೆಲಕ್ಕುರುಳಿದ ಬೈಕು ಸವಾರನ ಮೇಲೆ ಲಾರಿ ಹರಿದು ಸಾವು, ಪೋಲೀಸರ ಮೇಲೆ ಹಲ್ಲೆ

12:25 AM, Tuesday, March 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Mysore Accidentಮೈಸೂರು : ಹೆಲ್ಮೆಟ್ ಹಾಕಿಲ್ಲವೆಂದು ಬೈಕ್ ಸವಾರನಿಗೆ ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದಿದ್ದಾಗ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಹಿಂಬದಿಯಿಂದ ಲಾರಿ ಹರಿದು ಸಾವಿಗೀಡಾಗಿರುವ ದಾರುಣ ಘಟನೆ ನಗರದ ಹೊರವಲಯದ ಹಿನಕಲ್ ರಿಂಗ್ ರಸ್ತೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಎಚ್.ಡಿ.ಕೋಟೆ ಮೂಲದ ದೇವರಾಜು ಎಂದು ಗುರುತಿಸಲಾಗಿದೆ. ಈತನ ಜೊತೆ ಇದ್ದ ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಲ್ಮೆಟ್ ಹಾಕದೆ ಸಂಚರಿಸುತ್ತಿದ್ದಾಗ ಪೊಲೀಸರು ಬೈಕ್ ಸವಾರನಿಗೆ ನಿಲ್ಲಿಸಲು ಸೂಚನೆ ನೀಡಿದ್ದಾರೆ. ಆದರೆ ಸವಾರ ಬೈಕ್ ನಿಲ್ಲಿಸದಿದ್ದಾಗ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಹಿಂಬದಿಯಿಂದ ಲಾರಿ ಹರಿದು ಸಾವಿಗೀಡಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ಆಕ್ರೋಶಿತರಾದ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್‍ನಿಂದ ಹಾನಿಗೊಳಿಸಿದ್ದಾರೆ.

ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್‍ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English