ಬಾಡಿಗೆ ಮನೆ ಕೇಳುವ ನೆಪದಲ್ಲಿ ಚಿನ್ನಾಭರಣ ಲೂಟಿ : ಆರೋಪಿಯ ಬಂಧನ

1:41 PM, Tuesday, March 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Mujeebಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಮ ಮತ್ತು ನಿತ್ಯಾನಂದ ನಗರದ ಮನೆಗಳಿಗೆ ನುಗ್ಗಿ 1.40 ಲಕ್ಷ ರೂ. ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಸೊತ್ತು ಸಹಿತ ಪೊಲೀಸರು ಕಾಸರಗೋಡು ಜಿಲ್ಲೆಯ ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ, ಮಂಗಲ್ಪಾಡಿ ನಿವಾಸಿ ಮುಜೀಬ್ ರೆಹಮಾನ್ ಎಂ.ಎ. ಬಂಧಿತ ಆರೋಪಿ.

ಬಾಡಿಗೆ ಮನೆ ಕೇಳಿಕೊಂಡು ಬೆಳ್ಮ ಮತ್ತು ನಿತ್ಯಾನಂದ ನಗರದ ಅಶ್ವಿನಿ ಎಂಬವರ ಮನೆಗೆ ಹೋಗಿದ್ದನು. ಆರೋಪಿ ಮುಜೀಬ್ ಬಳಿಕ ಕೋಣೆಯೊಳಗೆ ನುಗ್ಗಿ 3.50 ಪವನ್ ತೂಕದ ಕರಿಮಣಿ ಸರ ಮತ್ತು 1 ಪವನ್ ತೂಕದ ಚಿನ್ನದ ಸರ ಸೇರಿ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವುದಾಗಿ ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಕಾಸರಗೋಡು ಜಿಲ್ಲೆಯ ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ 1.40 ಲಕ್ಷ‌ ರೂ. ಮೌಲ್ಯದ ಚಿನ್ನಾಭರಣ ಹಾಗೂ 35 ಸಾವಿರ ರೂ. ಮೌಲ್ಯದ ಆ್ಯಕ್ಟಿವ್ ಹೋಂಡಾ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English