[1]ಮಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು.
ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ ಎಂ.ಎಸ್, ಚಂದ್ರಮೋಹನ್ ಮೀನಾ ಪಾಲ್ಗೊಂಡಿದ್ದರು.