[1]ಕಾಸರಗೋಡು : ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ವಿ.ವಿ. ರಮೇಶನ್, ಕಾಸರಗೋಡು ಕ್ಷೇತ್ರದ ಎಂ.ಎ. ಲತೀಫ್ ಪರ ಚುನಾವಣಾ ಪ್ರಚಾರದಲ್ಲಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳದಲ್ಲಿ ಈ ಬಾರಿ ಒಂದು ಸ್ಥಾನಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಬಿಜೆಪಿ 2019 ರಲ್ಲಿ ಕೇವಲ ಒಂದೇ ಒಂದು ಸ್ಥಾನದಲ್ಲಿ ಖಾತೆ ತೆರೆದಿದ್ದು ನೇಮಂನಲ್ಲಿ ಗೆದ್ದಿತ್ತು. ಈ ಬಾರಿ ಈ ಖಾತೆಯನ್ನು ಮುಚ್ಚುತ್ತೇವೆ, ಕಾಂಗ್ರೆಸ್ ನ ಒಳಒಪ್ಪಂದದಿಂದ ಬಿಜೆಪಿ ಗೆದ್ದಿತ್ತು. ಈ ಬಾರಿ ಅದನ್ನು ಬಂದ್ ಮಾಡುತ್ತೇವೆ ಎಂದು ಹೇಳಿದರು.
ಮೊಗ್ರಾಲ್ ಶಾಲಾ ಮೈದಾನ ದಲ್ಲಿ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ವಿ.ವಿ. ರಮೇಶನ್, ಕಾಸರಗೋಡು ಕ್ಷೇತ್ರದ ಎಂ.ಎ. ಲತೀಫ್ ಪರ ಪ್ರಚಾರ ನಡೆಸಿದರು. ಪೆರಿಯದಲ್ಲಿ ಉದುಮ ಕ್ಷೇತ್ರದ ಎಲ್ ಡಿ ಎಫ್ ಅಭ್ಯರ್ಥಿ ಸಿ. ಎಚ್ ಕುಞಂಬು ಪರ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದರು.