ಯುವತಿಯೊಂದಿಗಿದ್ದ ಅನ್ಯ ಕೋಮಿನ ಯುವಕನಿಗೆ ಹಲ್ಲೆ : ಎಂಟು ಶಂಕಿತರು ವಶಕ್ಕೆ

6:06 PM, Friday, April 2nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Shashikumarಮಂಗಳೂರು : ಬೆಂಗಳೂರಿಗೆ ಕೆಲಸ ಹುಡುಕಲು ಅನ್ಯ ಕೋಮಿನ ಯುವಕನೊಂದಿಗೆ ಗುರುವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಯೊಂದಿಗಿದ್ದ ಇದ್ದ ಯುವಕನ ಮೇಲೆ ಹಿಂದೂ ಸಂಘಟನೆಗಳು ಹಲ್ಲೆ ನಡೆಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಎನ್.ಶಶಿಕುಮಾರ್,  ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ತಡೆದು ಅದರಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,  ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, 307 ಮತ್ತು ಐಪಿಸಿಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಆಯುಕ್ತರು ತಿಳಿಸಿದ್ದಾರೆ.

ಯುವತಿಯು ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕಲು ಹೊರಟಿದ್ದು, ಯುವತಿಗೆ ಬೆಂಗಳೂರಿನ ಪರಿಚಯವಿಲ್ಲದ ಕಾರಣ ಯುವಕನನ್ನು ತನ್ನೊಂದಿಗೆ ಕೆಲಸ ಹುಡುಕಲು ಕರೆದುಕೊಂಡು ಹೋಗಿದ್ದು, ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದರು” ಎಂದರು.

ಇನ್ನು ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಪ್ಪಿಸಲು ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಬಸ್ ನಿಲ್ದಾಣ, ಕಡಲ ತೀರಗಳು ಮತ್ತು ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English