- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸುರತ್ಕಲ್‌ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ

dredger [1]ಮಂಗಳೂರು : ಸುರತ್ಕಲ್‌ನ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ ಪತ್ತೆಯಾಗಿದೆ.

ಸುರತ್ಕಲ್‌ನ ಗುಡ್ಡಗಾಡು ಕೊಪ್ಲ ಬಳಿಯ ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ಭಗವತಿ ಪ್ರೇಮ್ ನಲ್ಲಿ ಶವ ಪತ್ತೆಯಾಗಿದೆ. ಈ ಡ್ರಜ್ಜರ್ ಒಡೆಯಲು ಕಂಪನಿಯೊಂದು ಗುತ್ತಿಗೆ ಪಡೆದಿದೆ. ಇದನ್ನು ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಲಾಗಿತ್ತು.

ಈ ಕಾವಲುಗಾರರಲ್ಲಿ ಉತ್ತರ ಕರ್ನಾಟಕ ಮೂಲದ ಶಂಕರ್ (32) ಎಂಬುವರು ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಬೆಳಗ್ಗೆ ಡ್ರಜ್ಜರ್ನಲ್ಲಿ ಅವರ ಶವ ಪತ್ತೆಯಾಗಿದೆ. ಈ ಸಂಬಂಧ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.