- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತೊಕ್ಕೊಟ್ಟು ಕೊರಗಜ್ಜನ ಕೋಲದಲ್ಲಿ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನ, ಓರ್ವನ ಬಂಧನ

Hafiz [1]ಮಂಗಳೂರು  : ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದ ಪಕ್ಕದ ಕಟ್ಟಡದ ಮೇಲಿಂದ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಪೊಲೀಸರೊಂದಿಗೆ ಸ್ಥಳೀಯರು ಸೇರಿ ಆರೋಪಿ ಮಹಮ್ಮದ್ ಹಫೀಝ್  ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಡಿ ನಿವಾಸಿ ಮಹಮ್ಮದ್ ಹಫೀಝ್ ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿ‌ಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ಬು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊರಗಜ್ಜನ ಕೋಲ ಸ್ಥಳದ ಸಮೀಪದಲ್ಲೇ ಕೃತ್ಯ ನಡೆದಿರುವುದು ಕೋಮು ಸಾಮರಸ್ಯ ಕದಡಲು ಯತ್ನಿಸಿದ ಎನ್ನಲಾಗಿದ್ದು, ಭಕ್ತಾಧಿಗಳು ಸಂಯಮದಿಂದ ವರ್ತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.