- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಗರದ ಕಾರಾಗೃಹದಲ್ಲಿ ಕೈದಿಗಳ ನಡುವೆ ಜಗಳ, ಇಬ್ಬರು ಆಸ್ಪತ್ರೆಗೆ ದಾಖಲು

jail clash [1]ಮಂಗಳೂರು: ದರೋಡೆ ಪ್ರಕರಣದ ಆರೋಪಿ ಮತ್ತು ಇಬ್ಬರು ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಗಾಯಗೊಂಡಿರುವ ಘಟನೆ ನಗರದ ಕಾರಾಗೃಹದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಅನ್ಸಾರ್ ಮತ್ತು ಝೈನುದ್ದೀನ್ ಗಾಯಾಳುಗಳು. ಬೆಳಗ್ಗೆ ಉಪಹಾರ ವಿತರಣೆ ವೇಳೆ ಘರ್ಷಣೆ ನಡೆದಿದೆ. ಪಣಂಬೂರು ಪೊಲೀಸರು ಬಂಧಿಸಿದ ದರೋಡೆ ಪ್ರಕರಣದ ಆರೋಪಿ ಸಮೀರ್ ಎಂಬಾತ ಹಲ್ಲೆ ನಡೆಸಿದ್ದಾನೆ. ಚಮಚೆ ಮತ್ತಿತರ ಅಡುಗೆ ಪಾತ್ರೆಗಳಿಂದ ಹಲ್ಲೆ ನಡೆದಿದೆ.

ಅನ್ಸಾರ್ ನ ಕೈ ಮತ್ತು ಕಾಲಿಗೆ, ಝೈನುದ್ದೀನ್ ಭುಜಕ್ಕೆ ಗಾಯವಾಗಿದೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.