ಮಂಗಳೂರು : ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳು ಯಾವುದು ಗೊತ್ತಾ ?

9:22 PM, Monday, April 26th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

jail clash ಮಂಗಳೂರು :   ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳನ್ನು ಕೇಳಿದರೆ ನೀವು ಬೆಚ್ಚಿ ಬೀಳಬಹುದು.  ಪ್ರಕರಣದ ನಂತರ  20 ಮಂದಿ ಯನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ.

ಜೈಲಿನಲ್ಲಿ ಸಹಚರರು ಹಾಗೂ ಜೈಲು ಸಿಬ್ಬಂದಿ ಮೇಲಿನ ಹಲ್ಲೆಗೆ ಸಂಬಂಧಿಸಿ ಐದು ಪ್ರಕರಣಗಳು ದಾಖಲಾಗಿದೆ ಎಂದು ಜೈಲ್ ಸುಪರಿಂಟೆಂಡ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಓರ್ವ ಆರೋಪಿ ಸಮೀರ್ ಎಂಬಾತನ ಮೇಲೆ 10ಕ್ಕೂ ಅಧಿಕ ಪ್ರಕರಣಗಳಿದ್ದು, ಅನ್ಸಾರ್ ಮೇಲೂ ಹಲವು ಪ್ರಕರಣಗಳಿವೆ.

ಈ ಆರೋಪಿಗಳು ಜೈಲಿನಲ್ಲಿ ಹೊಡೆದಾಟಕ್ಕೆ  ಕ್ಯಾರಂ ಬೋರ್ಡ್‌ನ ಫ್ರೇಂ ಅನ್ನು ತುಂಡು ಮಾಡಿ ಅದನ್ನು ಹರಿತವಾದ ಚೂರಿಯಾಗಿಸಿಕೊಂಡಿದ್ದಾರೆ  ಮತ್ತು ಟ್ಯೂಬ್‌ಲೈಟ್‌ನ್ನು ತುಂಡು ಮಾಡಿ ಅದರ ಪುಡಿಯನ್ನು ಬಟ್ಟೆಯಲ್ಲಿ ಕಟ್ಟಿ ಶಸ್ತ್ರಾಸ್ತ್ರವನ್ನಾಗಿಯೂ ಈ ಕೈದಿಗಳು ಉಪಯೋಗಿಸಿದ್ದರು ಎಂಬ ಮಾಹಿತಿ  ಪೊಲೀಸ್  ಅಧಿಕಾರಿಗಳಿಗೆ ತಲೆನೋವು ತಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English