ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ, ನಂತರ ವಿಹಾರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

5:05 PM, Wednesday, April 28th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Nithinಮಂಗಳೂರು : ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೋರ್ವ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಉಳ್ಳಾಲಬೈಲ್ ನಿವಾಸಿ ನಿತಿನ್ (32) ನಾಪತ್ತೆಯಾದ ವ್ಯಕ್ತಿ. ನಿತಿನ್ ಸೋಮವಾರ ಮಧ್ಯಾಹ್ನ ಇಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿದ್ದ. ತದನಂತರ ಸಂಜೆ ಮೂವರು ಸೇರಿ ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದರು. ಅಲ್ಲಿಂದ ನಿತಿನ್ ನಾಪತ್ತೆಯಾಗಿದ್ದಾನೆ ಎನ್ನಲಾಗ್ತಿದೆ.

ಆ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ನಿತಿನ್ ಅವಿವಾಹಿತನಾಗಿದ್ದು, ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ. ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English