- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬ್ಯಾರಿ ಪರಿಷತ್, ಮಂಗಳೂರು ಅಧ್ಯಕ್ಷ ಕೋವಿಡ್ ಸೋಂಕಿಗೆ ಬಲಿ

Aboobakkar [1]ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷ ಅಬೂಬಕರ್ ಪಲ್ಲಮಜಲು(48) ಕೋವಿಡ್-19 ಸೋಂಕಿನ ಚಿಕಿತ್ಸೆ ಫಲಿಸದೆ  ಶುಕ್ರವಾರ ಬೆಳಗ್ಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು  ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಇವರು ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು ಅಲ್ಲದೆ ಪಲ್ಲಮಲಜು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.