- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು

Prasjanth [1]ಮಂಗಳೂರು : ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪದವಿನಂಗಡಿಯಲ್ಲಿ ನಡೆದಿದೆ.

ಮೃತನನ್ನುಕೆಪಿಟಿ ಸಮೀಪದ  ಶರಬತ್ ಕಟ್ಟೆ ನಿವಾಸಿ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.

ಪ್ರಶಾಂತ್ ನಗರದ ಹೊರವಲಯದಲ್ಲಿರುವ ನೀರು ಮಾರ್ಗದ ಚೇತನಾ ಎಂಟರ್‌ಪ್ರೈಸಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಬೋಂದೆಲ್ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಂಗಡಿಯೊಂದರ ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

prashanth [2]

prashanth [3]