ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ

1:57 PM, Wednesday, May 12th, 2021
Share
1 Star2 Stars3 Stars4 Stars5 Stars
(No Ratings Yet)
Loading...

Bharath Shettyಮಂಗಳೂರು : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಪ್ರಾಥಮಿಕ ಆರೋಗ್ಯ , ಕುಳಾಯಿ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿ ನೀಡಿದರು. ಅಲ್ಲಿ ನಾಗರಿಕರಿಗೆ ಲಸಿಕಾ ಕೇಂದ್ರದ ವ್ಯವಸ್ಥೆ, ಕೊರೋನ ರೋಗಿಗಳ ಚಿಕಿತ್ಸೆಯ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು.

ಶಾಸಕರೊಂದಿಗೆ ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವೈದ್ಯರಿಗೆ ನೆರವಾಗಲು ನೋಡಲ್ ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಇದ್ದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು.ಕಾರ್ಪೊರೇಟರ್ ಅಧ್ಯಕ್ಷತೆಯಲ್ಲಿ ಸೋಂಕಿತರ ನಿಗಾಕ್ಕೆ ಕ್ರಮ ತೆಗೆದು ಕೊಳ್ಳಲಾಗಿದೆ.ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದಲ್ಲಿ ಸಸ್ಪೆಂಡ್ ಗೆ ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English