ಶಿವಮೊಗ್ಗ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಹುಂಚ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಂಡ್ಲಗದ್ದೆ ಸಮೀಪದ ಹಾಡಿಗದ್ದೆಯಲ್ಲಿ ಗುರುವಾರ ನಡೆದಿದೆ.
ಹಾಡಿಗದ್ದೆಯ ಉಮೇಶ್(47) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.
ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದರಿಂದ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
Click this button or press Ctrl+G to toggle between Kannada and English