ತಾಲೂಕು ಪಂಚಾಯತ್ ಸದಸ್ಯನ ಮೇಲೆ ಬಂಟ್ವಾಳ ಏಎಸ್ ಐ ಯಿಂದ ಹಲ್ಲೆ

12:56 PM, Friday, May 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

Bantwala SIಬಂಟ್ವಾಳ : ಮೆಡಿಕಲ್ ಶಾಪ್ ಗೆ ಬಂದ ತಾಲೂಕು ಪಂಚಾಯತ್ ಸದಸ್ಯನ  ಮೇಲೆ ಕಲ್ಲಡ್ಕದಲ್ಲಿ ಬಂಟ್ವಾಳ ಏಎಸ್ ಐ ಹಲ್ಲೆ ನಡೆಸಿದ್ದು ಇದನ್ನು ಸಾರ್ವಜನಿಕರು ಪ್ರಶ್ನಿಸಿದದ ಘಟನೆ ಶುಕ್ರವಾರ ಬೆಳಗ್ಗೆ ಕಲ್ಲಡ್ಕದಲ್ಲಿ ನಡೆದಿದೆ.

ಲಾಕ್ ಡೌನ್ ನಿಯಮಾವಳಿಯಂತೆ ಬೆಳಗ್ಗೆ 9 ಗಂಟೆಯ ಬಳಿಕ ಕಲ್ಲಡ್ಕದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಪೋಲೀಸರು ಸೂಚಿಸುತ್ತಿದ್ದರು. ಈ ವೇಳೆ ಕಾರು ನಿಲ್ಲಿಸಿ ಮೆಡಿಕಲ್ ಶಾಪ್ ಗೆ ಬರುತ್ತಿದ್ದ ಬಂಟ್ವಾಳ ತಾಲೂಕು ಪಂಚಾಯತ್ ಹಾಲಿ ಬಿಜೆಪಿ ಸದಸ್ಯ ಮಹಾಬಲ ಆಳ್ವ ಗೋಳ್ತಮಜಲು ಅವರ ಮೇಲೆ  ಬಂಟ್ವಾಳ ನಗರ ಠಾಣೆಯ ಏಎಸ್ ಐ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮಹಾಬಲ ಮತ್ತು ಏ.ಎಸೈ ನಡುವೆ ಮಾತಿಗೆ ಮಾತು ಬೆಳೆದು ಏಕಾಏಕಿ ಮಹಾಬಲ ಆಳ್ವ ಮತ್ತು ಏಎಸ್ ಐ ಕೈ ಮಿಲಾಯಿಸಿ ಕೊಂಡಿದ್ದಾರೆ. ಇದರಿಂದ ಮಹಾಬಲ ಅವರ ತಲೆಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಅಗತ್ಯ ಸಾಮಗ್ರಿಗಳ ಖರೀದಿಗೆ ಬಂದವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಕೆಲವು ಹೊತ್ತು ವಾಗ್ವಾದ ನಡೆಯಿತು.

ಬಳಿಕ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣಾ ಎಸ್ ಐ ಅವಿನಾಶ್ ಬಂದು ಪರಿಸ್ಥಿತಿ ತಿಳಿಗೊಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English