ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ, ಉದ್ಯಮಿಯ ಬಂಧನ

7:33 PM, Saturday, May 15th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Iqbalಉಳ್ಳಾಲ : ರಾಮ ಕೃಷ್ಣ, ಬಸವಣ್ಣ ರಾಮ ದೇವರು ಅಲ್ಲ ಅವರೆಲ್ಲ ಮಾನವರಂತೆ. ನಾವು ಯಾತಕ್ಕೆ ಹಿಂದೂ ಹಬ್ಬಗಳಿಗೆ ಶುಭ ಕೋರಬೇಕು ಎಂದೆಲ್ಲಾ ಹೇಳಿ  ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ, ಉದ್ಯಮಿಯನ್ನು ಉಳ್ಳಾಲ ಪೊಲೀಸರು ಮೇ. 15 ರ ಶನಿವಾರ ಬಂಧಿಸಿದ್ದಾರೆ.

ಬಂಧಿತನನ್ನು ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಅಂಗಡಿ ಹೊಂದಿರುವ ಉದ್ಯಮಿ ಸ್ವಾಲಿಝ್ ಇಕ್ಬಾಲ್ (45) ಎಂದು ಗುರುತಿಸಲಾಗಿದೆ.

ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್ ಹಿಂದು ದೇವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗುತ್ತಿದ್ದಂತೆ, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದರು.
ಅದರಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿದ್ದು, ಶನಿವಾರ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English