ಪುತ್ತೂರು : ಲಾರಿ-ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

1:25 PM, Monday, May 17th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

Seetharamಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ತೆಂಕಿಲ ಎಂಬಲ್ಲಿ  ಲಾರಿ ಮತ್ತು ಸ್ಕೂಟರೊಂದರ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಮೃತರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸೀತಾರಾಮ ಭಟ್ ಎಂದು ಗುರುತಿಸಲಾಗಿದೆ.

ಸೀತಾರಾಮ ಭಟ್ ಬೆಳ್ಳಾರೆಯಿಂದ ತನ್ನ ಸ್ಕೂಟರ್‌ನಲ್ಲಿ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತೆಂಕಿಲದಲ್ಲಿ ಮುಂಭಾಗದಿಂದ ಆಗಮಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English