ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಟಗ್ ಬೋಟಿನ ಎಲ್ಲಾ 9 ಜನರ ರಕ್ಷಣೆ

3:44 PM, Monday, May 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Tug boat Rescueಮಂಗಳೂರು  : ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳೀನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರೊಂದಿಗೆ ಕೋಸ್ಟಲ್ ಗಾರ್ಡ್ ಡಿ. ಐ.ಜಿ ಶ್ರೀ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್ ಪಿಯಲ್  ಕಂಪನಿಗೆ ಆಗಮಿಸುವ ಕಚ್ಚಾ ತೈಲ ಅಂಡರ್ ಗ್ರೌಂಡ್ ಪೈಪ್ ಕನೆಕ್ಟ್ ಮಾಡುವ ಗುತ್ತಿಗೆ ಪಡೆದಿರುವ ಕೆ ಈ ಐ  – RSOR ಕಂಪನಿಯ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ವೆಸಲ್ ನಲ್ಲಿರುವ ಜನರ ರಕ್ಷಣೆಯ ಕುರಿತು ಚರ್ಚಿಸಿದರು.

ಇಂದು ಮುಂಜಾನೆಯಿಂದ ನೌಕಾ ಸೇನೆಯ ಹೆಲಿಕಾಪ್ಟರ್ ಹಾಗೂ ಶಿಪ್ ಮೂಲಕ ಕಾರ್ಯಾಚರಣೆ ನಡೆಯುತ್ತಿದ್ದು, ಎಲ್ಲಾ 9 ಜನರನ್ನು ರಕ್ಷಿಸಲಾಗಿದೆ. ಎಂದು ಕೋಸ್ಟಲ್ ಗಾರ್ಡ್ ಡಿ. ಐ.ಜಿ ಶ್ರೀ ಎಸ್.ಬಿ. ವೆಂಕಟೇಶ್ ಅವರು ಮಾಹಿತಿ ನೀಡಿದರು.

Coromandel-Express

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English