ಲಾಕ್ ಡೌನ್ ಸಂಕಷ್ಟದ್ದ ರೈತನಿಂದ 3000 ಕೆಜಿ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

5:53 PM, Monday, May 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

onionಹಿರಿಯೂರು: ಲಾಕ್ ಡೌನ್ ನಿಂದ ಬೆಳೆದ ಬೆಳೆ ಮಾರಲಾಗದೆ ಸಂಕಷ್ಟದಲ್ಲಿದ್ದ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ.

ಲಾಕ್ ಡೌನ್ ವೇಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿ ಈರುಳ್ಳಿಯನ್ನು ಕೊಂಡೊಯ್ದು ಮಾರಾಟ ಮಾಡಿ ಬಂದಿದ್ದಾರೆ.

ನಟ ಉಪೇಂದ್ರ ಅವರು 60 ಚೀಲ, 3000 ಕೆಜಿ ಈರುಳ್ಳಿಗೆ ಬಾಡಿಗೆ ಸೇರಿಸಿ 37 ಸಾವಿರ ಹಣ ಕೊಟ್ಟು ಖರೀದಿಸಿ ಸಂಕಷ್ಟದಲ್ಲಿದ್ದ ರೈತನಿಗೆ ನೆರವಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English