ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

3:03 PM, Tuesday, May 18th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Ramanatha Rai ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ ಎಂದ ಅವರು, ಮಲೆನಾಡು ಭಾಗದಲ್ಲಿ ಗುಂಪು ಮನೆ ಕಡಿಮೆ. ರಾಜ್ಯದಲ್ಲಿ ಪ್ಯಾಕೇಜ್ ಕೊಡಬೇಕು. ಅದರಲ್ಲೂ ಇಂತಹ ಮಂದಿಗೆ ಪ್ಯಾಕೇಜ್ ಕೊಡಲೇಬೇಕು ಎಂದು ಆಗ್ರಹಿಸಿದ ಅವರು, ಇವತ್ತು ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು. ಮನೆಮನೆಗೆ ಕಿಟ್ ಹೋಗುತ್ತಿತ್ತು ಎಂದು ಸವಾಲೆಸೆದರು.

ಪ್ರಧಾನಿಯವರ ಇಮೇಜನ್ನು ಹೇಗೆ ಸೇವ್ ಮಾಡುವುದು ಅಂತಾ ಬಿಜೆಪಿಯವರು ಯೋಚಿಸುತ್ತಿದ್ದಾರೆಯೇ ವಿನಹ ಜನರ ಪ್ರಾಣ ಕಾಪಾಡುವ ಬಗ್ಗೆ ಯಾವುದೇ ಯೋಚನೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English