- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೋನಾಗೆ ಹೆದರಿ ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಶಿಕ್ಷಕ

lokesh [1]ಮೈಸೂರು: ಕೊರೋನಾ ಅದೆಂತಹ ಸಾಂಕ್ರಾಮಿಕ ನೋಡಿ. ಇಲ್ಲೊಬ್ಬ ಶಿಕ್ಷಕ ಕೊರೋನಾ  ಪಾಸಿಟಿವ್ ಬಂದಿದ್ದಕ್ಕೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಘಟನೆ ಕೆ.ಆರ್. ನಗರದಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ.

ಲೋಕೇಶ್ಗೆ ಕಳೆದ ವರ್ಷ ಮದುವೆ ಆಗಿತ್ತು. ಇವರಿಗೆ ಇತ್ತೀಚಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಕುಟುಂಬಸ್ಥರು‌ ಆತ್ಮಸ್ಥೈರ್ಯ ತುಂಬಿದ್ದರು. ವಾರ್ ರೂಂನಿಂದ ಕರೆ‌ ಮಾಡಿ ಆತಂಕ ಪಡಬೇಡಿ ಎಂದು ತಿಳಿಸಿದ್ದರು.

ಪತ್ನಿ‌ ಮನೆಗೆ ಹೋಗುವುದಾಗಿ ತನ್ನ ಮನೆಯಲ್ಲಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ಅಲ್ಲಿಯೇ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದರು. ಎರಡು ದಿನದ ಬಳಿಕ ಹಾಸನ ಜಿಲ್ಲೆಯ ಅರಕಲಗೂಡಿನ ಕೇರಳಪುರದ ಕಾವೇರಿ ನದಿಯಲ್ಲಿ ಇವರ ಶವ ಪತ್ತೆಯಾಗಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.