ಸ್ಟಿರಾಯ್ಡ್ ಬಳಕೆಗೆ ಕೆಲ ನಿರ್ಬಂಧನೆಗಳು ಅಗತ್ಯ: ಆರ್ ಅಶೋಕ

9:40 PM, Friday, May 21st, 2021
Share
1 Star2 Stars3 Stars4 Stars5 Stars
(No Ratings Yet)
Loading...

R Ashok ಬೆಂಗಳೂರು : ಕೋವಿಡ್ ಸೋಂಕಿತರು ಅತೀಯಾದ ಸ್ಟಿರಾಯ್ಡ್ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಬ್ಲಾಕ್ ಫಂಗಸ್ ಗೆ ತುತ್ತಾಗುವುದಕ್ಕೆ ಇದು ಒಂದು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಇದರ ಬಳಕೆಗೆ ಸೂಕ್ತ ಕಡಿವಾಣ ಹಾಕಬೇಕಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.

ಇಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡ್ರಗ್ಸ್ ಲಾಜಿಸ್ಟಿಕ್ಸ್ ಸೊಸೈಟಿಯಧಿಕಾರಿಗಳ ಜೊತೆಗೆ ಸಚಿವ ಆರ್ ಅಶೋಕ ಅವರು ಕೋವಿಡ್ ಔಷಧಿ ಲಭ್ಯತೆ ಕುರಿತಂತೆ ಪರಾಮರ್ಶೆ ಸಭೆ ನಡೆಸಿದರು. ಈ ವೇಳೆ ಸ್ಟಿರಾಯ್ಡ್ ಬಳಕೆಯ ಕುರಿತಂತೆ ಸೂಕ್ತ ಮಾರ್ಗಸೂಚಿಯನ್ನ ಹೊರಡಿಸಬೇಕಿದೆ. ಇಂದು ಹೋಮ್ ಐಸೋಲೇಷನ್ ಕಿಟ್ ನಲ್ಲಿಯೂ ಕೂಡಾ ಸ್ಟಿರಾಯ್ಡ್ ಮಾತ್ರೆಗಳನ್ನ ಇಟ್ಟು ಕೊಡಲಾಗುತ್ತಿದೆ. ಇದರ ಬಳಕೆಯನ್ನ ಆಸ್ಪತ್ರೆಗಳಲ್ಲಿ ಅದು ವೈದ್ಯರ ಸೂಚನೆಯ ಮೇರೆಗೆ ಮಾತ್ರ ಬಳಸುವಂತೆ ಸೂಚಿಸಬೇಕು. ಹಾಗೆಯೇ ವಿಶ್ವಾರೋಗ್ಯ ಸಂಸ್ಥೆಯ ಮಾರ್ಗಸೂಚಿಯನ್ನ ಅನುಸರಿಸುವುದರ ಜೊತೆಗೆ ಕೆಲ ನಿಭರ್ಂಧನೆಗಳನ್ನು ಹಾಕಬೇಕಿದೆ, ಎಂದರು.

ನಂತರದಲ್ಲಿ ರೆಮ್ಡೆಸಿವಿರ್ ಲಭ್ಯತೆ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು,”ಸಧ್ಯ ರೆಮ್ಡೆಸಿವಿರ್ ವಯಲ್ ಗಳ ಕೊರತೆ ಕಾಡುತ್ತಿಲ್ಲ. ಈ ಮೊದಲು ದಿನಕ್ಕೆ 18 ರಿಂದ 20 ಸಾವಿರ ವಯಲ್ ಗಳಿಗೆ ಬೇಡಿಕೆ ಇತ್ತು. ಈಗ ಅದು 5 ಸಾವಿರಕ್ಕೆ ಇಳಿದಿದೆ. ಖುದ್ದು ನಾನು ಕೂಡಾ ಕೆಲ ಆಸ್ಪತ್ರೆಗಳಿಗೆ ಕರೆ ಮಾಡಿ ಅವರಿಗೆ ಅಗತ್ಯವಿರುವಷ್ಟು ವಯಲ್ ಗಳು ದೊರಕುತ್ತಿರುವುದರ ಬಗ್ಗೆ ಖಚಿತ ಪಡಿಸಿಕೊಂಡಿದ್ದೇನೆ”, ಎಂದು ತಿಳಿಸಿದರು.

ಬ್ಲಾಕ್ ಫಂಗಸ್ ವಿಚಾರವಾಗಿ ನನಗೂ ಕೂಡಾ ಹಲವು ಕರೆಗಳು ಬರುತ್ತಿವೆ. ಈಗಾಗಲೇ ಚಿಕಿತ್ಸೆಯ ಕುರಿತಂತೆ ಸ್ಪಷ್ಟ ಮಾಹಿತಿಗಳನ್ನ ನೀಡಲಾಗಿದೆ. ಚಿಕಿತ್ಸೆಗೆ ಬೇಕಾದ ಔಷಧಿ ಕುರಿತಂತೆ ಈಗಾಗಲೇ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅವರ ಜೊತೆ ಮಾತನಾಡಿದ್ದೇನೆ. ನಾಳೆ 10 ಸಾವಿರ ವಯಲ್ ಗಳನ್ನ ಕೇಂದ್ರವು ಕಳುಹಿಸಿಕೊಡಲಿದ್ದು, ಇನ್ನೂ ಹೆಚ್ಚಿನ ಹಂಚಿಕೆ ರಾಜ್ಯಕ್ಕೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ”, ಎಂದರು.

ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಗಳಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,”ಚಿತಾಗಾರಗಳಲ್ಲಿ ಇನ್ನೂ 1 ಸಾವಿರಕ್ಕೂ ಅಧಿಕ ಸಾವನ್ನಪ್ಪಿದವರ ಅಸ್ಥಿಗಳನ್ನ ಸಂಬಂಧಿಗಳು ತೆಗೆದುಕೊಂಡು ಹೋಗಿಲ್ಲ. ನಾವು ಸಂಬಂಧಿಸಿದವರಿಗೆ ಕರೆ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದರೆ ಅವರ ಫೆÇೀನ್ ಗಳು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರವು ಗೌರವಯುತವಾಗಿ ಅವುಗಳ ವಿಸರ್ಜನೆಗೆ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳಲಿದೆ”, ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುವ ಕುರಿತಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರದ ಕುರಿತಂತೆ ಪ್ರಶ್ನೆಗೆ ಉತ್ತರಿಸಿದ ಸಚಿವರು,”ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಿರೋಧ ಪಕ್ಷದ ನಾಯಕರಿಗೆ ಹೀಗೆ ಜಿಲ್ಲಾಧಿಖಾರಿಗಳ ಸಭೆ ನಡೆಸಲು ಅನುಮತಿ ಕೊಟ್ಟಿದ್ದರಾ? ಆ ರೀತಿ ಸಭೆ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಬೇಕಿದ್ದರೆ ಅವರು ಪತ್ರ ಮುಖೇನ ಅಗತ್ಯ ಮಾಹಿತಿ ತೆಗೆದುಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English