ಚಾಮರಾಜನಗರ ದುರಂತ ಸಂತ್ರಸ್ತರಿಗೆ ಪರಿಹಾರ ಮಂಜೂರು

8:24 PM, Saturday, May 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

chamaraja Nagar ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಮಂಜೂರು ಮಾಡಿದೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನ ಆಮ್ಲಜನಕದ ಅಭಾವದಿಂದ ಸಾವು ಸಂಭವಿಸಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರವು ನ್ಯಾಯಾಲಯಕ್ಕೆ ವಾಗ್ದಾನ ನೀಡಿದಂತೆ ದುರಂತ ಸಂತ್ರಸ್ತರಿಗೆ ತಲಾ ರೂ.2 ಲಕ್ಷದಂತೆ ಒಟ್ಟು 24 ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 48 ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English