- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಹೆದರಿ ಶಿಕ್ಷಕ ಆತ್ಮಹತ್ಯೆ

mahantesh [1]ಗದಗ: ಜಕ್ಕಲಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ರೋರ್ವರು ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಾಂತೇಶ್ ಕುದರಿ (32) ಮನೆಯಲ್ಲಿ ನೇಣಿಗೆ ಶರಣಾದವರು.

ಮಹಾಂತೇಶ್ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಹಾಂತೇಶ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಆದರೆ ಶಿಕ್ಷಕ ಮಾತ್ರ ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು.

ಕೊರೊನಾ ಪಾಸಿಟಿವ್ ಆಗಿದ್ದರಿಂದಾಗಿ ಮನೆ ಮಂದಿಗೆಲ್ಲಾ ಬರಬಹುದು ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ನರೇಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ದೂರು ದಾಖಲಿಸಿಕೊಂಡಿದ್ದಾರೆ.