- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು : ಗ್ರಾಮ ಪಂಚಾಯಿತಿ ಕಚೇರಿಯ ಸಮೀಪ ಮಾಸ್ಕ್ ಹಾಕಲು ಹೇಳಿದ ಪಿಡಿಒ ಕಪಾಳಕ್ಕೊಡೆದ ಯುವಕರು

Rajendra Shetty [1]ಮಂಗಳೂರು : ಮಲ್ಲೂರ್ ಗ್ರಾಮ ಪಂಚಾಯಿತಿ ಸಮೀಪ ಅಲೆದಾಡುತ್ತಿದ್ದ  ಐದು ಮಂದಿ ಯುವಕರಿಗೆ  ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಸಾರ್ವಜನಿಕ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ  ಮೇ 25 ರ ಮಂಗಳವಾರ ದಂದು  ಕಪಾಳಕ್ಕೊಡೆದು ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

ಪಿಡಿಒ ರಾಜೇಂದ್ರ ಶೆಟ್ಟಿ ಅವರು ಗ್ರಾಮ ಪಂಚಾಯಿತಿ ಕಚೇರಿಯ ಸಮೀಪದಲ್ಲಿದ್ದ ಐದು ಮಂದಿ ಯುವಕರಿಗೆ ಮಾಸ್ಕ್  ಧರಿಸಿ ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಕೇಳಿದ್ದರು ಎಂದು ಹೇಳಲಾಗಿದೆ. ಆದರೆ ಅಬೂಬಕರ್  ಎಂಬ ವ್ಯಕ್ತಿ  ಇತರ ನಾಲ್ವರೊಂದಿಗೆ ಸೇರಿ  ಪಿಡಿಒ ಮುಖದ ಮೇಲೆ  ಹಲ್ಲೆ ನಡೆಸಿದರು ಎಂದು ದೂರು ನೀಡಲಾಗಿದೆ,

ಈ ಸಂಬಂಧ ಮಂಗಳೂರು ಗ್ರಾಮೀಣ ಪೊಲೀಸರು ಕರ್ನಾಟಕ ಸಾಂಕ್ರಾಮಿಕ ಕಾಯ್ದೆಯ ಐಪಿಸಿ ಸೆಕ್ಷನ್ 332, 504, 34 ಮತ್ತು ಸೆಕ್ಷನ್ 5 (1) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.