ಉಡುಪಿ ಆಶ್ರಮದ 12 ಮಂದಿ ಪುಟಾಣಿ ಮಕ್ಕಳಿಗೆ ಹಾಗೂ ಒಂಭತ್ತು ಸಿಬ್ಬಂದಿ ಗೆ ಕೊರೋನ ಸೋಂಕು

6:05 PM, Thursday, May 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

krishnanugrahaಉಡುಪಿ : ಮಕ್ಕಳ ದತ್ತು ಸ್ವೀಕಾರ ಕೇಂದ್ರ ‘ಕೃಷ್ಣಾನುಗ್ರಹ’ದ 14 ವರ್ಷದೊಳಗಿನ 12 ಮಂದಿ ಪುಟಾಣಿ ಮಕ್ಕಳು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ.

ಇಲ್ಲಿನ ಸಂತೆಕಟ್ಟೆ ಬಳಿ ಇರುವ  ಈ ಕೇಂದ್ರದಲ್ಲಿ ಆಶ್ರಮದ ಆಯಾ ಸೇರಿದಂತೆ ಒಂಭತ್ತು ಸಿಬ್ಬಂದಿ ಸಹ ಸೋಂಕಿಗೆ ಒಳಗಾಗಿದ್ದಾರೆ.

ಪಾಸಿಟಿವ್ ಬಂದಿರುವ ಎಲ್ಲಾ 21 ಮಕ್ಕಳನ್ನು ಕೃಷ್ಣಾನುಗ್ರಹ ಆಶ್ರಮದಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿದಿನ ಎರಡು ಬಾರಿ ವೈದ್ಯರು ಬಂದು ಮಕ್ಕಳ ತಪಾಸಣೆ ನಡೆಸುತ್ತಿದ್ದಾರೆ. ಯಾರಲ್ಲೂ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೃಷ್ಣಾನುಗ್ರಹದಲ್ಲಿ ಒಟ್ಟು 29 ಮಂದಿ ಅನಾಥ, ವಿಕಲಚೇತನ ಹಾಗೂ ವಿಶೇಷ ಮಕ್ಕಳಿದ್ದು, 10 ಮಂದಿ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದರ ಫಲಿತಾಂಶ ಬುಧವಾರ ಬಂದಿದ್ದು, ಒಟ್ಟು 21 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಇದೀಗ ಇಡೀ ಕಟ್ಟಡವನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪರೀಕ್ಷೆಯಲ್ಲಿ ನೆಗೆಟಿವ್ ಬಂದಿರುವ 17 ಮಕ್ಕಳು ಹಾಗೂ ಇಬ್ಬರು ಸಿಬ್ಬಂದಿಗೆ ಪಕ್ಕದಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ..

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English