ಕಾಪು: ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಹರಿದಾಸ್ ಭಟ್ ಸಾವು

9:22 PM, Thursday, May 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

GN Bhatಕಾಪು: ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮೃತ ಪಟ್ಟಿದ್ದಾರೆ.

ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ ಬೈಕ್‌ಗೆ ರಿಕ್ಷಾ ಡಿಕ್ಕಿ ಹೊಡೆದು ಹರಿದಾಸ್ ಭಟ್ ಅವರಿಗೆ ಗಂಭೀರ ಏಟಾಗಿತ್ತು. ತತ್‌ಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಸುಮಾರು 45 ವರ್ಷಗಳಿಂದಲೂ ಸಾರಿಗೆ ಉದ್ಯಮ ನಡೆಸುತ್ತಿರುವ ಇವರು ದೇಶಾದ್ಯಂತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದು, ಜೆ.ಎನ್. ಭಟ್ರು ಎಂದೇ ಪರಿಚಿತರಾಗಿದ್ದರು.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಸೇವಾ ಸಮಿತಿ, ಪಾಂಗಾಳ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಉಡುಪಿ ಜಿಲ್ಲಾ ಟೆಂಪೋ ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿ ಕಾರಿಯಾಗಿಯೂ ಸೇವೆ ಸಲ್ಲಿಸಿದ್ದು, ಜನಾನುರಾಗಿಯಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English