[1]ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಯಿತು.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಲಸಿಕೀಕರಣದ ಅಭಿಯಾನಕ್ಕೆ ಚಾಲನೆ ನೀಡಿದರು.
ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಸಿಜೆಎಂ ಸಂಜಯ ಗುಡಗುಡಿ, ವ್ಯೆದ್ಯಾಧಿಕಾರಿಗಳಾದ ಡಾ. ಕೆ.ಎನ್. ತನುಜಾ, ಡಾ.ಕವಿತಾ ಮತ್ತು ಅವರ ಸಿಬ್ಬಂದಿ ಹಾಜರಿದ್ದು ಅಭಿಯಾನವನ್ನು ಯಶಸ್ವಿಗೂಳಿಸಿದರು.
120ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನ್ಯಾಯಾಧೀಶರು ಮೊದಲ ಡೋಸ್ ಲಸಿಕೆ ಪಡೆದರು.