- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಿಶೇಷ ಚೇತನ ಮಕ್ಕಳಿಗೆ ದಾನಿಗಳು ನೀಡಿದ ಹಣ ನೀಡುವಂತೆ ಪೀಡಿಸಿ ಮಗನಿಂದ ತಂದೆಯ ಕೊಲೆ

Sundara  Poojary [1]ಚಿಕ್ಕಮಗಳೂರು: ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ಆದಾಯವಿಲ್ಲದೆ  ಮನೆಗೆ ಬಂದು ತಾನು ಕೇಳಿದಾಗ ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಹಿರಿಯ ಮಗ ತಂದೆಯನ್ನೇ ಕೊಲೆಗೈದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಚನ್ನಡ್ಲುವಿನಲ್ಲಿ ನಡೆದಿದೆ.

ಸುಂದರ ಪೂಜಾರಿ (52) ಮೃತ ದುರ್ದೈವಿ. ಈ ಘಟನೆ ಮೂಡಿಗೆರೆ ತಾಲೂಕಿನ ಚನ್ನಡ್ಲುವಿನಲ್ಲಿ ನಡೆಡಿದ್ದು ಇವರನ್ನು ಹಿರಿಯ ಮಗ ನಿಖೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಸುಂದರ ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿದ್ದು,  ಇಬ್ಬರು ವಿಶೇಷ ಚೇತನ ಮಕ್ಕಳು ಮತ್ತು ಪತ್ನಿಯೊಂದಿಗೆ ಅವರು ವಾಸವಾಗಿದ್ದು, ದಾನಿಗಳು ಅವರಿಗೆ ನೆರವು ನೀಡಿದ್ದರಿಂದ ಲಕ್ಷಾಂತರ ರೂ. ಸಂಗ್ರಹವಾಗಿದೆ.

ಹಿರಿಯ ಮಗ ನಿಖೇಸ್ ಎಲ್ಲರನ್ನು ಬಿಟ್ಟು ಬೆಂಗಳೂರು ಸೇರಿದ್ದ. ಇದೀಗ ಕೊರೊನಾದಿಂದ   ರಾಜ್ಯಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ನಿಖೇಶ್, ಕಳೆದ 1 ತಿಂಗಳಿನಿಂದ ಮನೆಗೆ ಮರಳಿದ್ದನು.

ಹೀಗೆ ಮನೆಯಲಿದ್ದ ನಿಖೇಶ್, ಹಣ ನೀಡುವಂತೆ ತಂದೆ-ತಾಯಿಯನ್ನು ಪೀಡಿಸುತ್ತಿದ್ದ. ಈ ವೇಳೆ ತಂದೆ ಮಗನಿಗೆ ಹಣ ನೀಡಿರಲಿಲ್ಲ. ಇದೇ ಸಿಟ್ಟಿನಿಂದ ನಿಖೇಶ್ ತಂದೆಯ ಮೇಲೆ ಮಾರಣಾಂತಿಕ ಮಾಡಿದ್ದಾನೆ. ಕೂಡಲೇ ಸುಂದರ ಪೂಜಾರಿಯನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಪುತ್ರನನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ.