- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ

CM [1]ಬೆಂಗಳೂರು  : ಮಹತ್ವದ ಸುದ್ದಿಗೋಷ್ಟಿ ನಡೆಸಿದ ಸಿಎಂ ಯಡಿಯೂರಪ್ಪ ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡೋದಾಗಿ ಘೋಷಿಸಿದ್ದಾರೆ.

ಶನಿವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟ ಅನಾಥ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ ಎಂದಿದ್ದಾರೆ.

ಈ ಅನಾಥ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಹಾಗೂ ಈ ಸಹಾಯಧನ ಈ ಸಂಸ್ಥೆಗಳಿಗೆ ತಲುಪಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.